ಕರಾವಳಿ ಜನರಿಗೆ ಮಾರಕವಾಗುವ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ- ಜೊಯಿಡಾ ಕ್ಷೇತ್ರದ ಜನರಿಂದ ಸೋಮವಾರ ಜೊಯಿಡಾದಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಜೊಯಿಡಾ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಕಾಲ್ನಡಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು, ಕಸ್ತೂರಿ ರಂಗನ್ ವರದಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಅನುಷ್ಠಾನವಾಗದಂತೆ ಒತ್ತಾಯಿಸಿದರು. ವನ್ಯ ಜೀವಿಗಳ ಸಂರಕ್ಷಣೆ ಆಗಬೇಕು, ಆದರೆ ಜನರ ಜೀವನಕ್ಕೆ ತೊಂದರೆಯಾಗಬಾರದು. ಕಸ್ತೂರಿ ರಂಗನ್ ವರದಿ ವೈಜ್ಞಾನಿಕವಲ್ಲ, ಸ್ಥಳಗಳಿಗೆ ಭೇಟಿ ನೀಡಿ ಮಾಡಿದ್ದಲ್ಲ. ಅರಣ್ಯ ಸಂರಕ್ಷಣೆಗೆ ಸಾಕಷ್ಟು ಕಾಯ್ದೆಗಳಿವೆ, ನಿಯಮಗಳಿವೆ. ಜನರ ಶ್ರೇಯೋಭಿವೃದ್ಧಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನೆಯ ವೇಳೆ ಆರ್.ವಿ.ದೇಶಪಾಂಡೆ ಆಗ್ರಹಿಸಿದರು. #Karwar #KasturiranganReport #Protest Our Website : https://Vijaykarnataka.com Facebook: / vijaykarnataka Twitter: / vijaykarnataka