ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ವಿಶ್ವವಿಖ್ಯಾತ ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ವೈರಮುಡಿ ಉತ್ಸವ ನಿನ್ನೆ ಅದ್ಧೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ಸವಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಚೆಲುವ ನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಸಚಿವ ಕೆ. ನಾರಾಯಣ ಗೌಡ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ , ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು . ಬಳಿಕ ಮುಖ್ಯಮಂತ್ರಿ, ಕೋವಿಡ್ನಿಂದಾಗಿ ಕಳೆದ ಎರಡು ವರ್ಷಗಳಿಂದ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ನಡೆದಿತ್ತು. ಈ ವರ್ಷ ವೈಭವ ಯುತವಾಗಿ ನಡೆಯುತ್ತಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಮೇಲುಕೋಟೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಮೈ ಶುಗರ್ ಕಾರ್ಖಾನೆ ಪುನರಾ ರಂಭಕ್ಕೂ ಈಗಾಗಲೇ ಯೋಜಿಸಲಾಗಿದೆ ಎಂದರು.